JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Friday, December 29, 2023

Kuvempu Details In Kannada

  Jnyanabhandar       Friday, December 29, 2023
Rashtrakavi Kuvempu

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

ಇವರು ಬರೆದಿರುವ ಪ್ರಮುಖ ಕೃತಿಗಳು: ಕೊಳಲು, ಪಾಂಚಜನ್ಯ, ಪ್ರೇಮಕಾಶ್ಮೀರ, ಪಕ್ಷಿಕಾಶಿ ಮುಂತಾದ ಕವನ ಸಂಕಲನಗಳು, ನನ್ನ ದೆವರು ಮತ್ತು ಇತರ ಕಥೆಗಳು, ಸಂನ್ಯಾಸಿ ಮತ್ತು ಇತರ ಕಥೆಗಳು -ಕಥಾಸಂಕಲನಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು - ಕಾದಂಬರಿಗಳು. ರಸೋವೈಸಃ, ತಪೋನಂದನ - ವಿಮರ್ಶಾ ಸಂಕಲನಗಳು, ಅಮಲನ ಕಥೆ, ಮೋಡಣ್ಣನ ತಮ್ಮ, ಬೊಮ್ಮನಹಳ್ಳಿಯ ಕಿಂದರಿಜೋಗಿ - ಮಕ್ಕಳ ಪುಸ್ತಕಗಳು, ಜಲಗಾರ, ಯಮನ ಸೋಲು, ಬೆರಳ್ಗೆ ಕೊರಳ್ - ನಾಟಕಗಳು, ನೆನಪಿನ ದೋಣಿಯಲ್ಲಿ - ಆತ್ಮಕಥನ ಇವಲ್ಲದೆ ಮುಂತಾದ ಸುಮಾರು ಎಪ್ಪತ್ತು ಕೃತಿಗಳನ್ನು ರಚಿಸಿದ್ದಾರೆ.

ಶ್ರೀಯುತರಿಗೆ ’ಶ್ರೀರಾಮಾಯಣ ದರ್ಶನಂ’ ಮಹಾಕಾವ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ೧೯೬೮ರಲ್ಲಿ ಭಾರತೀಯ ಜ್ಞಾನಪೀಠ ಪ್ರಶಸ್ತಿ ದೊರಕಿದೆ. ಧಾರವಾಡದಲ್ಲಿ ನಡೆದ ೧೯೫೭ ರ ಮೂವತ್ತೊಂಬತ್ತನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಇವರಿಗೆ ೧೯೬೪ರಲ್ಲಿ ರಾಷ್ಟ್ರಕವಿ, ೧೯೮೮ರಲ್ಲಿ ಪಂಪ ಪ್ರಶಸ್ತಿ, ೧೯೯೧ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ದೊರೆತಿದೆ. ಅಲ್ಲದೆ ಮೈಸೂರು, ಕರ್ನಾಟಕ, ಬೆಂಗಳೂರು ಮತ್ತು ಗುಲ್ಬರ್ಗ ವಿಶ್ವವಿದ್ಯಾನಿಲಯಗಳಿಂದ ಗೌರವ ಡಾಕ್ಟರೇಟ್ ಸಂದಿದೆ. ೧೯೯೨ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಲಭಿಸಿದೆ.

ಕೃತಿಗಳು
ಮಹಾಕಾವ್ಯ
ಶ್ರೀ ರಾಮಾಯಣ ದರ್ಶನಂ (1949)

ಖಂಡಕಾವ್ಯ
ಚಿತ್ರಾಂಗದಾ (1936)

ಕವನ ಸಂಕಲನಗಳು
ಕೊಳಲು (1930)
ಪಾಂಚಜನ್ಯ (1933)
ನವಿಲು (1934)
ಕಲಾಸುಂದರಿ (1934)
ಕಥನ ಕವನಗಳು (1937)
ಕೋಗಿಲೆ ಮತ್ತು ಸೋವಿಯಟ್ ರಷ್ಯಾ (1944)
ಪ್ರೇಮ ಕಾಶ್ಮೀರ (1946)
ಅಗ್ನಿಹಂಸ (1946)
ಕೃತ್ತಿಕೆ (1946)
ಕಿಂಕಿಣಿ (ವಚನ ಸಂಕಲನ) (1946)
ಷೋಡಶಿ (1946)
ಚಂದ್ರಮಂಚಕೆ ಬಾ ಚಕೋರಿ (1957)
ಇಕ್ಷುಗಂಗೋತ್ರಿ (1957)
ಅನಿಕೇತನ (1963)
ಜೇನಾಗುವ (1964)
ಅನುತ್ತರಾ (1965)
ಮಂತ್ರಾಕ್ಷತೆ (1966)
ಕದರಡಕೆ (1967)
ಪ್ರೇತಕ್ಯೂ (1967)
ಕುಟೀಚಕ (1967)
ಹೊನ್ನ ಹೊತ್ತಾರೆ (1976)
ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ (1981)

ಕಥಾ ಸಂಕಲನ
ಸಂನ್ಯಾಸಿ ಮತ್ತು ಇತರ ಕಥೆಗಳು (1936)
ನನ್ನ ದೇವರು ಮತ್ತು ಇತರ ಕಥೆಗಳು (1940)

ಕಾದಂಬರಿಗಳು
ಕಾನೂರು ಹೆಗ್ಗಡತಿ (1936)
ಮಲೆಗಳಲ್ಲಿ ಮದುಮಗಳು (1967)

ನಾಟಕಗಳು
ಯಮನ ಸೋಲು (1928)
ಜಲಗಾರ (1928)
ಬಿರುಗಾಳಿ (1930)
ವಾಲ್ಮೀಕಿಯ ಭಾಗ್ಯ (1931)
ಮಹಾರಾತ್ರಿ (1931)
ಸ್ಶಶಾನ ಕುರುಕ್ಷೇತ್ರಂ (1931)
ರಕ್ತಾಕ್ಷಿ (1933)
ಶೂದ್ರ ತಪಸ್ವಿ (1944)
ಬೆರಳ್‍ಗೆ ಕೊರಳ್ (1947)
ಬಲಿದಾನ (1948)
ಚಂದ್ರಹಾಸ (1963)
ಕಾನೀನ (1974)

ಪ್ರಬಂಧ
ಮಲೆನಾಡಿನ ಚಿತ್ರಗಳು (1933)

ವಿಮರ್ಶೆ
ಕಾವ್ಯವಿಹಾರ (1946)
ತಪೋನಂದನ (1950)
ವಿಭೂತಿಪೂಜೆ (1953)
ದ್ರೌಪದಿಯ ಶ್ರೀಮುಡಿ (1960)
ರಸೋ ವೈ ಸಃ (1963)
ಇತ್ಯಾದಿ (1970)

ಆತ್ಮಕಥೆ
ನೆನಪಿನ ದೋಣಿಯಲ್ಲಿ: ಕುವೆಂಪು ಮದುವೆ ಪ್ರಸಂಗ

ಜೀವನ ಚರಿತ್ರೆಗಳು
ಸ್ವಾಮಿ ವಿವೇಕಾನಂದ
ರಾಮಕೃಷ್ಣ ಪರಮಹಂಸ




ಅನುವಾದ
ಗುರುವಿನೊಡನೆ ದೇವರಡಿಗೆ (ಭಾಗ 1, 2) (1954)
ಕೊಲಂಬೋ ಇಂದ ಆಲ್ಮೋರಕೆ

ಭಾಷಣ-ಲೇಖನ
ಸಾಹಿತ್ಯ ಪ್ರಚಾರ (1930)
ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ (1944)
ಷಷ್ಠಿನಮನ (1964)
ಮನುಜಮತ-ವಿಶ್ವಪಥ (1971)
ವಿಚಾರ ಕ್ರಾಂತಿಗೆ ಆಹ್ವಾನ (1976)

ಶಿಶು ಸಾಹಿತ್ಯ
ಅಮಲನ ಕಥೆ (1924)
ಮೋಡಣ್ಣನ ತಮ್ಮ (ನಾಟಕ) (1926)
ಹಾಳೂರು (1926)
ಬೊಮ್ಮನಹಳ್ಳಿಯ ಕಿಂದರಿಜೋಗಿ (1928)
ನನ್ನ ಗೋಪಾಲ (ನಾಟಕ) (1930)
ನನ್ನ ಮನೆ (1946)
ಮೇಘಪುರ (1947)
ಮರಿವಿಜ್ಞಾನಿ (1947)
ನರಿಗಳಿಗೇಕೆ ಕೋಡಿಲ್ಲ (1977)

ಇತರೆ
ಜನಪ್ರಿಯ ವಾಲ್ಮೀಕಿ ರಾಮಾಯಣ

ಆಯ್ದ ಸಂಕಲನಗಳು
ಕನ್ನಡ ಡಿಂಡಿಮ (1968)
ಕಬ್ಬಿಗನ ಕೈಬುಟ್ಟಿ (1973)
ಪ್ರಾರ್ಥನಾ ಗೀತಾಂಜಲಿ (1972)
logoblog

Thanks for reading Kuvempu Details In Kannada

Previous
« Prev Post

No comments:

Post a Comment

If You Have any Doubts, let me Comment Here