JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Tuesday, January 2, 2024

SSLC Kannada and English Medium Maths Question Paper

  Jnyanabhandar       Tuesday, January 2, 2024
Subject:Maths Kannada and English Medium Model Question Papers 2024 Karnataka SSLC Board Exams will be conducted for the academic year 2024...



Exam tips: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಮಾರ್ಕ್ಸ್ ತೆಗೆಯಲು ಇಲ್ಲಿವೆ ಟಿಪ್ಸ್ !
ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಆತಂಕ ಶುರುವಾಗುತ್ತದೆ. ಬಹುತೇಕ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಸಮಯದಲ್ಲಿ ಟೆನ್ಷನ್ ಇರುತ್ತದೆ. ಪರೀಕ್ಷೆಗೆ ಸಂಪೂರ್ಣ ತಯಾರಿ ಇಲ್ಲದಿದ್ದರೆ, ಸರಿಯಾಗಿ ಎಕ್ಸಾಂ ಬರೆಯಲು ಸಾಧ್ಯವಾಗುವುದಿಲ್ಲ ಎಂಬ ಭಾವನೆಯಿಂದಲೇ ಆತಂಕಕ್ಕೆ ಒಳಗಾಗುತ್ತಾರೆ. ಇಂತಹ ಉದ್ವಿಗ್ನತೆಯಿಂದಾಗಿ ಪರೀಕ್ಷೆಗೆ ಎರಡು ಮೂರು ತಿಂಗಳ ಮುಂಚೆಯೇ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಪರೀಕ್ಷೆಗೆ ತಯಾರಾಗಲು ತುಂಬಾ ಕಷ್ಟಪಟ್ಟು ಓದಬೇಕು ನಿಜ, ಆದರೆ ಅದಕ್ಕಾಗಿ ಟೆನ್ಷನ್ ತೆಗೆದುಕೊಳ್ಳಬೇಕು ಎಂದಲ್ಲ.

ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಆತಂಕ ಶುರುವಾಗುತ್ತದೆ. ಬಹುತೇಕ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಸಮಯದಲ್ಲಿ ಟೆನ್ಷನ್ ಇರುತ್ತದೆ. ಪರೀಕ್ಷೆಗೆ ಸಂಪೂರ್ಣ ತಯಾರಿ ಇಲ್ಲದಿದ್ದರೆ, ಸರಿಯಾಗಿ ಎಕ್ಸಾಂ ಬರೆಯಲು ಸಾಧ್ಯವಾಗುವುದಿಲ್ಲ ಎಂಬ ಭಾವನೆಯಿಂದಲೇ ಆತಂಕಕ್ಕೆ ಒಳಗಾಗುತ್ತಾರೆ. ಇಂತಹ ಉದ್ವಿಗ್ನತೆಯಿಂದಾಗಿ ಪರೀಕ್ಷೆಗೆ ಎರಡು ಮೂರು ತಿಂಗಳ ಮುಂಚೆಯೇ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗುತ್ತಾರೆ. ಪರೀಕ್ಷೆಗೆ ತಯಾರಾಗಲು ತುಂಬಾ ಕಷ್ಟಪಟ್ಟು ಓದಬೇಕು ನಿಜ, ಆದರೆ ಅದಕ್ಕಾಗಿ ಟೆನ್ಷನ್ ತೆಗೆದುಕೊಳ್ಳಬೇಕು ಎಂದಲ್ಲ.

ತುಂಬಾ ನಿರಾಳ ಮನಸ್ಸಿನಿಂದ ಪರೀಕ್ಷೆಗೆ ಚೆನ್ನಾಗಿ ತಯಾರಿ ನಡೆಸಬಹುದು. ಪರೀಕ್ಷೆಯ ತಯಾರಿಗೆ ವಿದ್ಯಾರ್ಥಿಗಳು ಒಂದಿಷ್ಟು ಒಳ್ಳೆ ಸಲಹೆಗಳನ್ನು ಪಾಲಿಸಿದರೆ, ಫಲಿತಾಂಶವೂ ಚೆನ್ನಾಗಿ ಬರುತ್ತದೆ. ಪರೀಕ್ಷೆಗೆ ತಯಾರಿ ನಡೆಸಲು ಇಲ್ಲಿ ನಾವು ಕೆಲವು ಟಿಪ್ಸ್ಗಳನ್ನು ನೀಡಿದ್ದೇವೆ. ಅದರ ಸಹಾಯದಿಂದ ನೀವು ಯಾವುದೇ ಟೆನ್ಷನ್ ಇಲ್ಲದೆ ಆರಾಮವಾಗಿ ಪರೀಕ್ಷೆಯನ್ನು ಬರೆಯಬಹುದು.


ರಾತ್ರಿ ಚೆನ್ನಾಗಿ ನಿದ್ರೆ ಮಾಡಿ- ಥಾಮಸ್ ಎಡಿಸನ್ ಸ್ಟೇಟ್ ಯೂನಿವರ್ಸಿಟಿ ಪ್ರಕಾರ, ಪರೀಕ್ಷೆಯ ಹಿಂದಿನ ರಾತ್ರಿ ಚೆನ್ನಾಗಿ ನಿದ್ರೆ ಮಾಡುವುದು ಅವಶ್ಯಕ. ಹೀಗಾಗಿ ತಡರಾತ್ರಿಯವರೆಗೂ ಎಚ್ಚರವಾಗಿರೋದು ಬೇಡ. ಉತ್ತಮ ನಿದ್ರೆ ಮಾಡಲು ಮೊಬೈಲ್ ಫೋನ್‌ಗಳು ಮತ್ತು ಗ್ಯಾಜೆಟ್‌ಗಳನ್ನು ದೂರವಿರಿಸಿ. ರಾತ್ರಿ ಬೇಗ ಮಲಗಿ ಬೆಳಗ್ಗೆ ಏಳಲು ಪ್ರಯತ್ನಿಸಿ.

ಪ್ರೋಟೀನ್ ಆಹಾರ ಸೇವನೆ- ಪರೀಕ್ಷೆಯ ಸಮಯದಲ್ಲಿ, ನಿಮ್ಮ ಉಪಹಾರವು ಸಾಮಾನ್ಯ ದಿನದಂತೆ ಇರಬಾರದು, ಅದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಇರೋದು ಮುಖ್ಯವಾಗುತ್ತದೆ. ಮೊಟ್ಟೆ, ಕಡಲೆಹಿಟ್ಟು, ಹಾಲು, ಪನೀರ್, ಮೊಳಕೆಕಾಳುಗಳು, ಹಸಿರು ತರಕಾರಿಗಳನ್ನು ಪ್ರತಿದಿನ ಬೆಳಗಿನ ಉಪಾಹಾರದಲ್ಲಿ ಸೇರಿಸಿ. ಪ್ರತಿದಿನ ಹಣ್ಣುಗಳ ಸೇವನೆ ಮಾಡಿ. ನಿಮ್ಮ ಆಹಾರದಲ್ಲಿ ಸಿಟ್ರಸ್ ಹಣ್ಣನ್ನು ಸೇರಿಸಿ. ಬೆಳಿಗ್ಗೆ ಎದ್ದಾಗ, ಪ್ರತಿದಿನದಂತೆ ಹೆಚ್ಚು ಕಾಫಿ ಕುಡಿಯಬೇಡಿ. ಸೀಸನಲ್ ತರಕಾರಿಗಳು ಮತ್ತು ಹಣ್ಣುಗಳ ಸೇವನೆಯನ್ನು ಸಾಕಷ್ಟು ಪ್ರಮಾಣದಲ್ಲಿ ತಿನ್ನಿ. ಪರೀಕ್ಷೆಯ ಸಮಯದಲ್ಲಿ ನೀರನ್ನು ಹೆಚ್ಚಾಗಿ ಕುಡಿಯಿರಿ.

ವ್ಯಾಯಾಮ ಮಾಡಿ- ಪರೀಕ್ಷೆ ಹತ್ತಿರ ಬಂದ ತಕ್ಷಣ ನಿಯಮಿತವಾಗಿ ವ್ಯಾಯಾಮ ಮಾಡಿ. ಸ್ನಾಯು ಹಿಗ್ಗಿಸುವ ವ್ಯಾಯಾಮಗಳನ್ನು ಮಾಡುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ. ಯೋಗಾಸನ, ವ್ಯಾಯಾಮಗಳು ಮನಸ್ಸನ್ನು ಪ್ರಫುಲ್ಲಗೊಳಿಸುತ್ತವೆ. ಓದುತ್ತಾ ಕುರ್ಚಿಯ ಮೇಲೆ ಹೆಚ್ಚು ಕಾಲ ಕುಳಿತುಕೊಳ್ಳಬೇಡಿ, ಆಗಾಗ್ಗೆ ಎದ್ದು ವ್ಯಾಯಾಮ ಮಾಡಿ ಸ್ನಾಯುಗಳನ್ನು ಬಲಗೊಳಿಸಿ. ವ್ಯಾಯಾಮ ದೈಹಿಕವಾಗಿ ಮಾತ್ರವಲ್ಲ, ಮಾನಸಿಕ ನೆಮ್ಮದಿಯನ್ನೂ ನೀಡುತ್ತದೆ.

ಪ್ರಾಣಾಯಾಮ ಮಾಡಿ- ಪರೀಕ್ಷೆಯ ಸಮಯದಲ್ಲಿ ಪ್ರಾಣಾಯಾಮ ಮಾಡುವುದು ಉತ್ತಮ. ಪರೀಕ್ಷಾ ಹಾಲ್‌ನಲ್ಲಿ ಪ್ರಶ್ನೆ ಪತ್ರಿಕೆಯನ್ನು ಓದುವ ಮೊದಲು ದೀರ್ಘವಾದ ಉಸಿರನ್ನು ಒಳಗೆ ತೆಗೆದುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ದೀರ್ಘವಾದ ಉಸಿರಾಟದ ಅಭ್ಯಾಸವನ್ನು ಹೆಚ್ಚಿಸಿ. ನೀವು ತಜ್ಞರ ಮಾರ್ಗದರ್ಶನದಲ್ಲಿ ಧ್ಯಾನ ಮಾಡಿದರೆ, ಅದು ಉತ್ತಮವಾಗಿರುತ್ತದೆ.

ಸಮತೋಲಿತ ಆಹಾರ ಸೇವಿಸಿ - ಪರೀಕ್ಷೆಯಲ್ಲಿ ಮೆದುಳಿನ ಶಕ್ತಿಯನ್ನು ಹೆಚ್ಚಿಸಲು ಸಮತೋಲಿತ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಹೆಲ್ತ್‌ಲೈನ್‌ನ ಸುದ್ದಿ ಪ್ರಕಾರ, ಬ್ಲೂಬೆರ್ರಿ, ಅರಿಶಿನ, ಎಲೆಕೋಸು, ಕುಂಬಳಕಾಯಿ ಬೀಜಗಳು, ಡಾರ್ಕ್ ಚಾಕೊಲೇಟ್, ಬಾದಾಮಿ, ಕಿತ್ತಳೆ, ಮೊಟ್ಟೆ, ಹಸಿರು ಚಹಾ ಇತ್ಯಾದಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಈ ಆಹಾರಗಳು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ.


ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಘಟ್ಟಕ್ಕೆ ಬಂದು ವಿದ್ಯಾರ್ಥಿಗಳು ತಲುಪಿದ್ದಾರೆ. ವಾರ್ಷಿಕ ಪರೀಕ್ಷೆಗಳ ಭರಾಟೆ ಆರಂಭಗೊಂಡಿದೆ. ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಂತೂ ತಮ್ಮ ಪಬ್ಲಿಕ್‌ ಪರೀಕ್ಷೆಯ ಬಗೆಗೆ ಸಹಜವಾಗಿಯೇ ತುಸು ಆತಂಕದಲ್ಲಿದ್ದಾರೆ. ಆದರೆ ಎಲ್ಲ ತರಗತಿಗಳಲ್ಲಿ ಎದುರಿಸಿದ ಪರೀಕ್ಷೆಯಂತೆ ಇದೂ ಕೂಡ ಒಂದು ಎಂಬ ಮನೋಭಾವದೊಂದಿಗೆ ಪರೀಕ್ಷೆಗೆ ಸಮರ್ಪಕ ತಯಾರಿ, ಅಧ್ಯಯನ ನಡೆಸಿದರೆ ಈ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವುದು ಬಲು ಸುಲಭ. ಪರೀಕ್ಷೆ ತಯಾರಿ, ಪರೀಕ್ಷೆಯನ್ನು ಬರೆಯುವ ಸಂದರ್ಭದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತಲೂ ಗಮನಹರಿಸಿ ಅತ್ಮಸ್ಥೈರ್ಯವನ್ನು ವೃದ್ಧಿಸಿಕೊಳ್ಳುವುದು ಅತ್ಯಗತ್ಯ. ಈ ಬಗ್ಗೆ ಮಾನಸಿಕ ಆರೋಗ್ಯ ತಜ್ಞರು ವಿದ್ಯಾರ್ಥಿಗಳು ಮತ್ತವರ ಹೆತ್ತವರಿಗೆ ನೀಡಿರುವ ಕೆಲವೊಂದು ಸಲಹೆಗಳು ಇಲ್ಲಿವೆ.

ಪರೀಕ್ಷೆ’ ಎಂಬುದು ಜೀವನದ ಒಂದು ಭಾಗ. ನಾವೆಲ್ಲರೂ ಜೀವನದಲ್ಲಿ ಒಂದೊಂದು ಪರೀಕ್ಷೆ ಎದುರಿಸಲೇಬೇಕು. ಹೀಗಾಗಿ ಪರೀಕ್ಷೆ ಎಂಬ ಶಬ್ದವೇ ಸಾಮಾನ್ಯವಾಗಿ ನಮ್ಮಲ್ಲಿ ಆತಂಕ-ಭಯ ಹುಟ್ಟಿಸುತ್ತದೆ. ಇತ್ತೀಚೆಗೆ ಮಕ್ಕಳಲ್ಲಿ ಪರೀಕ್ಷೆ ಎಂಬ ಆತಂಕ ಕಾಣಿಸಿಕೊಳ್ಳುತ್ತಿದೆ.

ಪರೀಕ್ಷೆಯ ಬಗ್ಗೆ ಸ್ವಲ್ಪ ಮಟ್ಟಿನ ಆತಂಕ ಇರಬೇಕು. ಆತಂಕ ಇದ್ದರೆ ಮಾತ್ರ ಓದಲು ಪ್ರೇರಣೆ ಸಿಗುತ್ತದೆ. ಆತಂಕವಿಲ್ಲದಿದ್ದರೆ ಏನೂ ಆಗದು. ಆದರೆ ಆತಂಕ ಯಾವತ್ತಿಗೂ ಕೂಡ ಅತಿಯಾಗಿರಬಾರದು. ಒಂದು ವೇಳೆ ಅತಿ ಯಾದ ಆತಂಕಕ್ಕೊಳಗಾದರೆ ವಿದ್ಯಾರ್ಥಿಯ ಕಲಿಕೆ, ಪರೀಕ್ಷೆ ಹಾಗೂ ಫಲಿತಾಂಶದ ಮೇಲೆ ಅದು ಪರಿಣಾಮ ಬೀರುತ್ತದೆ.

ಪರೀಕ್ಷೆ ಇನ್ನು ಕೆಲವೇ ದಿನ ಇರುವುದರಿಂದ “ಓದಿಲ್ಲ’ ಎಂಬ ಭಯ ವಿದ್ಯಾರ್ಥಿಗಳಲ್ಲಿ ಇರಕೂಡದು. ಬದಲಾಗಿ ಇಲ್ಲಿಯವರೆಗೆ ಎಷ್ಟು ಓದಿದ್ದಾರೋ ಅದನ್ನು ಮಾತ್ರ ಮತ್ತೆ ಮತ್ತೆ ಓದಿ, ಮನನ ಮಾಡಿಕೊಳ್ಳುವ ಪ್ರಯತ್ನ ಮಾಡಿ. ಕೊನೆಯ ಹಂತದಲ್ಲಿರುವ ಕಾರಣದಿಂದ ಹೊಸ ಓದು ಮತ್ತಷ್ಟು ಆತಂಕ ತರಿಸಬಹುದು.

ಪರೀಕ್ಷಾ ತಯಾರಿ ಹೀಗಿರಲಿ
ಪರೀಕ್ಷೆಯ ಮುನ್ನಾ ದಿನ ಮಕ್ಕಳು ಕನಿಷ್ಠ 6 ಗಂಟೆ ನಿದ್ದೆ ಮಾಡಲೇಬೇಕು. ಶೇ.60 ರಷ್ಟು ಮಕ್ಕಳು ಪರೀಕ್ಷೆಯ ಮುನ್ನಾ ದಿನ ನಿದ್ದೆ ಮಾಡುವುದಿಲ್ಲ. ಬದಲಾಗಿ ರಾತ್ರಿಯವರೆಗೆ ಕುಳಿತು ಓದುತ್ತಾರೆ. ಇದು ಮರು ದಿನದ ಪರೀಕ್ಷೆಯ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಹೀಗಾಗಿ ಅವರಲ್ಲಿ ಒತ್ತಡ ಅಧಿಕ ವಾಗುತ್ತದೆ. ಜತೆಗೆ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಯ ದಿನ ಏನೂ ತಿನ್ನುವುದಿಲ್ಲ. ಇದು ಮತ್ತೂಂದು ಸಮಸ್ಯೆಗೆ ಕಾರಣವಾಗುತ್ತದೆ. ಬದಲಾಗಿ ಲಘು ಆಹಾರ ಸೇವಿಸಲೇಬೇಕು.

ಪರೀಕ್ಷೆಯ ಮುನ್ನ ಸಕಾರಾತ್ಮಕ ಭಾವನೆ ಯನ್ನು ಬೆಳೆಸಿಕೊಳ್ಳಬೇಕು. ಮನನ ಮಾಡಿ ಕೊಳ್ಳಬೇಕು. ಇದರ ಮೂಲಕ ಆತ್ಮಸ್ಥೈರ್ಯ ಬೆಳೆಸುವ ಪ್ರಯತ್ನ ಮಕ್ಕಳು ರೂಢಿಸಿಕೊಂಡರೆ ಉತ್ತಮ. ಪರೀಕ್ಷೆಗೆ ಒಂದು ವಾರ ಬಾಕಿ ಉಳಿದಿರುವಾಗಲೇ ಆರಾಮವಾಗಿರಲು ಮಕ್ಕಳು ನಿಯಮಿತವಾಗಿ ಉಸಿರಾ ಟದತ್ತ ಗಮನ ಕೇಂದ್ರೀಕರಿಸಿ ವ್ಯಾಯಾಮ ಮಾಡಿದರೆ ಉತ್ತಮ. ಇದರಿಂದಾಗಿ ದೇಹ ಹಾಗೂ ಮನಸ್ಸು ಶಾಂತವಾಗುತ್ತದೆ. ಇದು ನೆನಪಿನ ಶಕ್ತಿವೃದ್ಧಿಯಾಗಲು ಸಹಕಾರಿ.

ಪರೀಕ್ಷೆಗೂ ಮುನ್ನ ಪರೀಕ್ಷೆಯ ಬಗ್ಗೆ ಮಾತ್ರ ಗಮನಹರಿಸಬೇಕು. ಫಲಿತಾಂಶದ ಬಗ್ಗೆ ಅಲ್ಲ. ಚೆನ್ನಾಗಿ ಗೊತ್ತಿರುವ ಪ್ರಶ್ನೆಗೆ ಮೊದಲು ಉತ್ತರಿಸಿ, ಸ್ವಲ್ಪ ಗೊತ್ತಿರುವ ಪ್ರಶ್ನೆಗೆ ಮತ್ತೆ ಉತ್ತರಿಸುವ ಶೈಲಿ ಸಾಧ್ಯವಾದರೆ ಬೆಳೆಸಿಕೊಳ್ಳಿ. ಬಹುಮುಖ್ಯವಾಗಿ ಪ್ರಶ್ನೆಗಳು “ಕಷ್ಟ’ ಎಂಬ ಬಗ್ಗೆ ಗಾಬರಿಯಾಗಬೇಡಿ.

ಪರೀಕ್ಷೆ ಬಳಿಕ ಚರ್ಚೆ ಬೇಡ!
ಪರೀಕ್ಷೆಯ ಬಳಿಕ ಕೆಲವು ವಿದ್ಯಾರ್ಥಿಗಳು ಇತರ ಮಕ್ಕಳ ಜತೆಗೆ ಪ್ರಶ್ನೆ-ಉತ್ತರದ ಬಗ್ಗೆ ಚರ್ಚೆ ಮಾಡುತ್ತಾರೆ. ಒಂದು ವೇಳೆ ಆತಂಕ ಇರುವ ಮಕ್ಕಳಿಗೆ ಇಂತಹ ಚರ್ಚೆಯಿಂದಾಗಿ ತಾವು ತಪ್ಪು ಬರೆದಿದ್ದರೆ ಅಥವಾ ಉತ್ತರ ಗೊತ್ತಿದ್ದೂ ಬರೆಯದಿದ್ದರೆ ಆತಂಕ ಮತ್ತಷ್ಟು ಹೆಚ್ಚಾಗಬಹುದು. ಇದರಿಂದ ಮುಂದಿನ ಪರೀಕ್ಷೆಯ ತಯಾರಿ, ಓದಿನ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಒಂದು ವಿಷಯದ ಪರೀಕ್ಷೆ ಮುಗಿದ ಮೇಲೆ ಆ ಪರೀಕ್ಷೆಯ ವಿಚಾರವನ್ನು ಮರೆತು ಬಿಡಿ; ಬದಲಾಗಿ ಮುಂದಿನ ಪರೀಕ್ಷೆ ಬಗ್ಗೆ ಮಾತ್ರ ನಿಮ್ಮ ಗಮನವನ್ನೆಲ್ಲ ಕೇಂದ್ರೀಕರಿಸಿ.

ಪರೀಕ್ಷೆ ನೆಲೆಯಲ್ಲಿ ವಿದ್ಯಾರ್ಥಿಗಳು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇತ್ತ ಹೆಚ್ಚಿನ ಲಕ್ಷ್ಯ ಹರಿಸುವುದು ಅತೀ ಮುಖ್ಯ ಜತೆಯಲ್ಲಿ ಮಾನಸಿಕ ಆರೋಗ್ಯ ಚೆನ್ನಾಗಿರ ಬೇಕು. ಕಲಿಕೆಯ ಮಧ್ಯೆ ಐದು ನಿಮಿಷ ಗಳ ರಿಲ್ಯಾಕ್ಸ್‌ ತೆಗೆದುಕೊಳ್ಳುವುದು ಉತ್ತಮ. ರಿಲ್ಯಾಕ್ಸ್‌ ವೇಳೆ ಟಿವಿ, ಮೊಬೈಲ್‌ ದಾಸರಾಗು ವುದಲ್ಲ. ಒಂದು ವೇಳೆ ಮಕ್ಕಳಿಗೆ ಏನೇ ಸಮಸ್ಯೆ ಇದ್ದರೆ ಹೆತ್ತವರಲ್ಲಿ ಮಾತನಾಡಿ ಹಾಗೂ ಅವರು ಕೂಡ ಮಕ್ಕಳ ಜತೆಗೆ ಪರೀಕ್ಷಾ ಸಮಯ
ದಲ್ಲಿ ಹೆಚ್ಚು ಮಾತನಾಡಿ, ಧೈರ್ಯ ತುಂಬಿ.

ಫಲಿತಾಂಶದ ಬಗ್ಗೆ ಆಲೋಚನೆ ಬೇಡ; ನನ್ನ ಉತ್ತರಪತ್ರಿಕೆಯನ್ನು ಯಾರು ತಿದ್ದುತ್ತಾರೋ ಎಂಬ ಬಗ್ಗೆ ಯೋಚಿಸಬೇಡಿ- ಬದಲಾಗಿ ಪರೀಕ್ಷೆ ಬರೆಯುವುದು ಮಾತ್ರ ನಮ್ಮ ಕರ್ತವ್ಯ ಎಂಬುದು ಮಕ್ಕಳ ನೆನಪಿನಲ್ಲಿರಲಿ.
ಅಂತೂ, ಫಲಿತಾಂಶ ಏನೇ ಇರಲಿ; ಅದನ್ನು ಸ್ವೀಕರಿಸಲೇಬೇಕು. ಯಾಕೆಂದರೆ ಈ ಪರೀಕ್ಷೆಯ ಫಲಿತಾಂಶ ನಿಮ್ಮ ಜೀವನವನ್ನು ವರ್ಣಿಸುವುದಿಲ್ಲ. ಬದಲಾಗಿ ಈ ಪರೀಕ್ಷೆಯಲ್ಲಿ ಮಾತ್ರ ಹೇಗೆ ಫಲಿತಾಂಶ ಇದೆ ಎಂಬುದನ್ನು ಮಾತ್ರ ಹೇಳುತ್ತದೆ. ಜೀವನದ ಪರೀಕ್ಷೆ ಮುಂದೆಯೂ ಇದೆ!

ಎಸೆಸೆಲ್ಸಿ ಟಿಪ್ಸ್‌
– ಆತಂಕ ಸಹಜ, ಆದರೆ ಅತಿಯಾದ ಆತಂಕ ಪಡುವ ಅಗತ್ಯವಿಲ್ಲ.
– ಪರೀಕ್ಷೆ, ಫ‌ಲಿತಾಂಶದ ಬಗೆಗೆ ತಲೆಕೆಡಿಸಿಕೊಳ್ಳುವ ಬದಲು ಓದಿನತ್ತ ಗಮನ ಕೇಂದ್ರೀಕರಿಸಿ.
– ಕೊನೆಯ ಹಂತದಲ್ಲಿ ಈವರೆಗೆ ಓದಿದ ವಿಷಯಗಳನ್ನು ಮತ್ತೂಮ್ಮೆ ಓದಿ ಸರಿಯಾಗಿ ಮನದಟ್ಟು ಮಾಡಿ ಕೊಳ್ಳಿ. ಹೊಸದಾಗಿ ಓದು ಆರಂಭಿಸು ವುದು ಆತಂಕವನ್ನು ಹೆಚ್ಚಿಸೀತು.
– ಪರೀಕ್ಷೆಯ ಮುನ್ನಾದಿನ ಕನಿಷ್ಠ 6 ಗಂಟೆ ನಿದ್ದೆ ಮಾಡಿ. ನಿದ್ದೆಗೆಟ್ಟು ಓದುವುದು ಸರಿಯಲ್ಲ.
– ಅಧ್ಯಯನ ಮತ್ತು ಪರೀಕ್ಷೆಯ ವೇಳೆ ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತಲೂ ಗಮನಹರಿಸಿ.
– ಸಕಾರಾತ್ಮಕ ಮನೋಭಾವ ಮೈಗೂಡಿಸಿಕೊಂಡಲ್ಲಿ ಆತಂಕ ಕಡಿಮೆಯಾಗುತ್ತದೆ.
– ಪರೀಕ್ಷೆ ಎದುರಿಸಿದ ಬಳಿಕ ಆ ಬಗ್ಗೆ ಚರ್ಚೆ ಬೇಡ, ಮುಂದಿನ ವಿಷಯದ ಪರೀಕ್ಷೆಗೆ ಸಜ್ಜಾಗುವುದೇ ನಿಮ್ಮ ಆದ್ಯತೆಯಾಗಲಿ.



logoblog

Thanks for reading SSLC Kannada and English Medium Maths Question Paper

Previous
« Prev Post

No comments:

Post a Comment

If You Have any Doubts, let me Comment Here