JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, December 28, 2024

Kuvempu Birth Anniversary 2024

  Jnyanabhandar       Saturday, December 28, 2024

 Kuvempu Birth Anniversary 


ಡಿಸೆಂಬರ್ 29 ರಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್‌ 29, 1904ರಲ್ಲಿ ಜನಿಸಿದರು. ಕುವೆಂಪುರವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ.


ಮನುಜಪಥ ವಿಶ್ವಪಥ ಸಂದೇಶವನ್ನು ಸಾರಿದ ಶ್ರೇಷ್ಠ ವಿಶ್ವ ಮಾನವ ಕುವೆಂಪುರವರರವರ ಬಗೆಗಿನ ಆಸಕ್ತಿದಾಯಕ ವಿಚಾರಗಳು ಇಲ್ಲಿದೆ

ಕನ್ನಡ ಭಾಷೆ ಎಂದಾಗ ಮೊದಲು ನೆನಪಾಗುವುದು ರಸ ಋಷಿ ಕುವೆಂಪು. ಹೌದು, ಡಿಸೆಂಬರ್ 29 ರಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡ ನಾಡು ನುಡಿಗೆ ತನ್ನ ಪ್ರಾಣವನ್ನೇ ಮುಡಿಪಾಗಿಸಿಟ್ಟ ಸಾಹಿತಿ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. 20ನೇ ಶತಮಾನದಲ್ಲಿ ಅವರು ಬೋಧಿಸಿದ ಮನುಜಪಥ ವಿಶ್ವಪಥ ಸಂದೇಶವನ್ನು ಗೌರವಿಸುವ ಸಲುವಾಗಿ ಪ್ರತೀ ವರ್ಷ ಅವರ ಜನ್ಮ ದಿನವಾದ ಡಿಸೆಂಬರ್‌ 29 ಅನ್ನು ವಿಶ್ವ ಮಾನವ ದಿನ ಎಂದು ಆಚರಿಸುತ್ತ ಬರಲಾಗುತ್ತಿದೆ. ಈ ವಿಶೇಷ ದಿನದಂದು ಕುವೆಂಪುರವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಳ್ಳಲಾಗುತ್ತದೆ. ಅವರ ಜನ್ಮದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗುತ್ತದೆ.


ಕುವೆಂಪು ಅವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್‌ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ, ತಾಯಿ ಸೀತಮ್ಮ. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ ಹಾಗೂ ಕನ್ನಡದಲ್ಲಿ ಎಂ.ಎ. ಪದವಿಯನ್ನು ಪಡೆದರು. ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರೂ ಕೂಡ ಆಗಿ ಸೇವೆ ಸಲ್ಲಿಸಿದರು. ತದನಂತರದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾಗಿದ್ದ ಮಾನಸಗಂಗೋತ್ರಿಯನ್ನು ಕಟ್ಟಿ ಬೆಳೆಸಿ ಕೀರ್ತಿಗೆ ಇವರಿಗೆ ಸಲ್ಲಿಸುತ್ತದೆ.


ಕುವೆಂಪು ಅವರು ಕವಿ ಯಾಗಿ, ಕಾದಂಬರಿಕಾರರಾಗಿ ಸಾಹಿತ್ಯದ ವಿವಿಧ ಮಜಲುಗಳಲ್ಲಿ ಕೃಷಿ ಮಾಡಿದ, ಇಡೀ ಪ್ರಪಂಚಕ್ಕೆ ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇವರು ನೀಡಿದ ಕೊಡುಗೆ ಅಪಾರವಾಗಿದೆ. ಶ್ರೀರಾಮಾಯಣ ದರ್ಶನಂ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಸೇರಿದಂತೆ ವಿವಿಧ ಕೃತಿ ಹಾಗೂ ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಇವರು ಸಾಹಿತ್ಯ ಸೇವೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಕರ್ನಾಟಕ ರತ್ನ ಪ್ರಶಸ್ತಿ, ರಾಷ್ಟ್ರಕವಿ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, ಪಂಪ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳು ಲಭಿಸಿದೆ.

logoblog

Thanks for reading Kuvempu Birth Anniversary 2024

Previous
« Prev Post

No comments:

Post a Comment

If You Have any Doubts, let me Comment Here