JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, January 30, 2025

Mahatma Gandhi Death Anniversary

  Jnyanabhandar       Thursday, January 30, 2025
Mahatma Gandhi Death Anniversary

ಬ್ರಿಟಿಷರ ಕೈಯಿಂದ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಕೆಲ ಹೋರಾಟಗಾರರು ಕ್ರಾಂತಿಕಾರಿ ಮಾರ್ಗವನ್ನು ಅನುಸರಿಸಿದ್ದರು. ಆದರೆ ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗವನ್ನು ಅನುಸರಿಸಿ, ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಬ್ರಿಟಿಷರಲ್ಲಿ ನಡುಕ ಹುಟ್ಟಿಸಿದ್ದರು. ಹೀಗೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಗಾಂಧೀಜಿಯವರ ಪಾತ್ರ ಅಪಾರವಾದದ್ದು.

30 ಜನವರಿ 1948 ರಂದು ಮಹಾತ್ಮ ಗಾಂಧಿಯವರನ್ನು (Mahatma Gandhi) ಹತ್ಯೆ ಮಾಡಲಾಯಿತು. ಹತ್ಯೆಯ ಸ್ಮರಣಾರ್ಥ ಪ್ರತಿ ವರ್ಷ ಜನವರಿ 30 ರಂದು "ಹುತಾತ್ಮರ ದಿನ"ವನ್ನು (Martyrs' Day) ಆಚರಿಸಲಾಗುತ್ತದೆ, ಇದು ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲರನ್ನು ಗೌರವಿಸುವ ರಾಷ್ಟ್ರೀಯ ದಿನವಾಗಿದೆ.

1948, ಜನವರಿ 30ರಂದು ಮಹಾತ್ಮ ಗಾಂಧೀಜಿಯವರನ್ನು ನಾಥೂರಾಮ್‌ ಗೋಡ್ಸೆ ದೆಹಲಿಯ ಬಿರ್ಲಾ ಹೌಸ್‌ನಲ್ಲಿ ಹತ್ಯೆ ಮಾಡಲಾಯಿತು. ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಗಾಂಧಿಯವರ ಸ್ಮರಣಾರ್ಥವಾಗಿ ಮಾತ್ರವಲ್ಲದೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಶೌರ್ಯವನ್ನು ನೆನಪಿಸಲಾಗುತ್ತದೆ.

ಹುತಾತ್ಮರ ದಿನದ ಇತಿಹಾಸ

ಜನವರಿ 30, 1948 ರಂದು ಸ್ವಾತಂತ್ರ್ಯ ಚಳವಳಿಯ ನಾಯಕ ಮಹಾತ್ಮ ಗಾಂಧಿ ಅವರನ್ನು ನವದೆಹಲಿಯಲ್ಲಿ ಹತ್ಯೆ ಮಾಡಲಾಯಿತು. 1949 ರಲ್ಲಿ ಭಾರತ ಸರ್ಕಾರವು ಗಾಂಧಿಯವರ ಮರಣ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಪಾರ ಕೊಡುಗೆಗಳನ್ನು ಸ್ಮರಿಸಲು ಈ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿತು. ಅಂದಿನಿಂದ ಜನವರಿ 30 ರಂದು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.

ಹುತಾತ್ಮರ ದಿನದ ಮಹತ್ವ ಹಾಗೂ ಆಚರಣೆ

ಹುತಾತ್ಮರ ದಿನ ಕೇವಲ ಗಾಂಧಿಯವರ ಸ್ಮರಣೆಗೆ ಮಾತ್ರವಲ್ಲದೇ, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಮಡಿದ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಮಹತ್ವದ್ದಾಗಿದೆ. ಅಸಂಖ್ಯಾತ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾಮಾನ್ಯ ಜನರು ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಈ ದಿನವು ಅವರ ತ್ಯಾಗ ಹಾಗೂ ದೇಶಭಕ್ತಿಯ ಮಹತ್ವವನ್ನು ನೆನಪಿಸುತ್ತದೆ. ಹುತಾತ್ಮರ ದಿನದ ಈ ಸಂದರ್ಭದಲ್ಲಿ ರಾಜ್ ಘಾಟ್ ನಲ್ಲಿರುವ ಗಾಂಧಿಯವರ ಸಮಾಧಿಯ ಬಳಿ ಪ್ರಾರ್ಥನಾ ಸಭೆಗಳನ್ನು ಆಯೋಜಿಸಲಾಗುತ್ತದೆ. ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ, ರಕ್ಷಣಾ ಸಚಿವರು, ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಮತ್ತು ಮೂವರು ಸೇನಾ ಮುಖ್ಯಸ್ಥರು ಹುತಾತ್ಮರಿಗೆ ಗೌರವ ಸಲ್ಲಿಸುತ್ತಾರೆ.


ಗಾಂಧೀಜಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು

* ನೀವು ಜಗತ್ತಿನಲ್ಲಿ ನೋಡಲು ಬಯಸುವ ಬದಲಾವಣೆಯಾಗಿರಿ.

* ನಿಮ್ಮನ್ನು ಕಂಡುಕೊಳ್ಳಲು ಉತ್ತಮ ಮಾರ್ಗವೆಂದರೆ ಇತರರ ಸೇವೆಯಲ್ಲಿ ನಿಮ್ಮನ್ನು ಕಳೆದುಕೊಳ್ಳುವುದು.

* ಕಣ್ಣಿಗೆ ಒಂದು ಕಣ್ಣು ಮಾತ್ರ ಇಡೀ ಜಗತ್ತನ್ನು ಕುರುಡನನ್ನಾಗಿ ಮಾಡುತ್ತದೆ.

* ನೀವು ನಾಳೆ ಸಾಯುವವರಂತೆ ಬದುಕು. ನೀವು ಶಾಶ್ವತವಾಗಿ ಬದುಕಬೇಕು ಎಂಬಂತೆ ಕಲಿಯಿರಿ.

* ಭವಿಷ್ಯವು ಇಂದು ನೀವು ಏನು ಮಾಡುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿದೆ.
logoblog

Thanks for reading Mahatma Gandhi Death Anniversary

Previous
« Prev Post

No comments:

Post a Comment

If You Have any Doubts, let me Comment Here