JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, February 19, 2025

Chatrapati Shivaji Birth Anniversary

  Jnyanabhandar       Wednesday, February 19, 2025
Chatrapati Shivaji Birth Anniversary 

     *ಛತ್ರಪತಿ ಶಿವಾಜಿ*

🌹ಮರಾಠ ಸಾಮ್ರಾಜ್ಯದ ಸಂಸ್ಥಾಪಕ🌹


        ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ ( ಫೆಬ್ರವರಿ 19, 1630 / ಫೆಬ್ರವರಿ 19, 1627 - ಏಪ್ರಿಲ್ 3, 1680 ) ಮರಾಠಾ ರಾಜ್ಯದ ಸ್ಥಾಪಕರು. ಇವರು 1630 ( ಕೆಲವು ಮೂಲಗಳ ಪ್ರಕಾರ 1627 )  ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿ ಎಂಬಲ್ಲಿ ಜನಿಸಿದರು. ಇವರು 1674 ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು 1818 ರ ವರೆಗೂ ರಾರಾಜಿಸಿತು.

       ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ.
ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು. ಅಪ್ರತಿಮ ಯೋಧರೆನ್ನಿಸಿಕೊಂಡು ಹದಿಹರೆಯದಲ್ಲಿಯೇ ಯುದ್ಧಭೂಮಿಯಲ್ಲಿ ಪರಾಕ್ರಮ ಪ್ರದರ್ಶಿಸಿ ಮರಾಠ ರಾಜ್ಯ ಸ್ಥಾಪಿಸಿದ ಶಿವಾಜಿ ಮಹಾರಾಜರು.

      ಮಹಾರಾಷ್ಟ್ರದ ಅಸ್ಮಿತೆ ಶಿವಾಜಿ ಭೋಂಸ್ಲೆ ಅವರ ಕುಟುಂಬದ ತಾಯಿಬೇರು ಕನ್ನಡನಾಡಿನಲ್ಲಿದೆ. ಇದರ ವಾಸ್ತವಾಂಶಗಳೇನೇ ಇದ್ದರೂ ಶಿವಾಜಿಗೆ ಕನ್ನಡ ಭೂಮಿ ಪ್ರೇರಣಾ ಸ್ಥಳವಾಗಿತ್ತೆಂಬುದು ನಿಜ. ಕರ್ನಾಟಕಕ್ಕೂ ಮರಾಠರಿಗೂ ರಾಜಕೀಯ ಒಡನಾಟ ಆರಂಭವಾಗಿದ್ದು 17 ನೇ ಶತಮಾನದ ಮೊದಲಾರ್ಧದಲ್ಲಿ. ರಾಜ್ಯ ವಿಸ್ತರಣೆಯಲ್ಲಿ ಮೊಗಲರಿಗೂ ವಿಜಾಪುರದ ಆದಿಲ್ ಶಾಹಿಗಳಿಗೂ ಕರಾರು ಏರ್ಪಟ್ಟು (1636) ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡಿನ ಕೆಲವು ಭಾಗಗಳ ಮೇಲೆ ಹಿಡಿತ ಸಾಧಿಸಲು ಹವಣಿಸುತ್ತಿದ್ದರು. ಇದರಿಂದಾಗಿ ವಿಜಾಪುರದ ಸುಲ್ತಾನರು ಈ ಪ್ರದೇಶಗಳಲ್ಲಿ ಆಗಿಂದಾಗ್ಗೆ ದಂಡಯಾತ್ರೆಗಳನ್ನು ನಡೆಸುತ್ತಲೇ ಇದ್ದರು. ಇಂತಹ ದಂಡಯಾತ್ರೆಗಳಲ್ಲಿ ಮರಾಠಿ ಸರದಾರರು ಮುಂಚೂಣಿಯಲ್ಲಿದ್ದು ಬಹುತೇಕ ಗೆಲುವುಗಳಿಗೆ ಕಾರಣರಾಗಿದ್ದರು. ಇಂತಹ ಧೈರ್ಯಶಾಲಿ ಮರಾಠಿ ಸರದಾರರಲ್ಲಿ ಮಾಲೋಜಿ ಭೋಂಸ್ಲೆಯ ಮಗ ಶಹಾಜಿ ಭೋಂಸ್ಲೆ ಅವರೂ ಒಬ್ಬರು. ವಿಜಾಪುರದ ಅಣತಿಯಂತೆ ಸೈನ್ಯ ಮುನ್ನಡೆಸುತ್ತಿದ್ದ ಶಹಾಜಿ ಹಾಗೂ ರಣದುಲ್ಲಾ ಖಾನ್​ರು ಬೆಂಗಳೂರು ಕೆಂಪೇಗೌಡರ ಸೈನ್ಯದೊಡನೆ ಮುಖಾಮುಖಿಯಾಗಿದ್ದು 1638 ರ ಡಿಸೆಂಬರ್ ಮಾಹೆಯಲ್ಲಿ. ಜೋರು ಕಾಳಗದ ಬಳಿಕ ಸಂಧಿ ಏರ್ಪಟ್ಟು ಕೆಂಪೇಗೌಡ ತನ್ನ ರಾಜಧಾನಿಯನ್ನು ಮಾಗಡಿಗೆ ಸ್ಥಳಾಂತರಿಸಿದಾಗ ಬೆಂಗಳೂರು ಕೋಟೆ ವಿಜಾಪುರ ಸುಲ್ತಾನರ ಕೈವಶವಾಯಿತು. ಆಗ ಬೆಂಗಳೂರನ್ನು ಮಹಮ್ಮದ್ ಆದಿಲ್ ಷಾ ನಿಂದ ಜಹಗೀರು ಪಡೆದರು ಶಹಾಜಿ ಭೋಂಸ್ಲೆ. ಛತ್ರಪತಿ ಶಿವಾಜಿ ಮರಣ ಹೊಂದಿದ ಸ್ಥಳ ಚಿತ್ರದುರ್ಗದ ಬೊಮ್ಮಸಮುದ್ರ.

      ಬಹುಪಾಲು ಸಮಯವನ್ನು ಯುದ್ಧಗಳಲ್ಲಿಯೇ ಕಳೆಯುತ್ತಿದ್ದ ಶಹಾಜಿ ಅವರು ಜೀಜಾಬಾಯಿಯನ್ನು ಲಗ್ನವಾಗಿದ್ದರು. ಬೆಂಗಳೂರನ್ನು ಜಹಗೀರಾಗಿ ಪಡೆದು ಅದನ್ನು ಮುಖ್ಯ ಸೇನಾನೆಲೆಯನ್ನಾಗಿ ಮಾಡಿಕೊಂಡು ದ್ವಿತೀಯ ಪತ್ನಿ ಸುಧಾಬಾಯಿಯೊಡನೆ ವಾಸಿಸುತ್ತಿದ್ದರು. ಇಲ್ಲಿ ಶಹಾಜಿ ಜಾಗೀರುದಾರರಾಗಿದ್ದರೂ ಸ್ವತಂತ್ರ ರಾಜರಂತೆಯೇ ಆಡಳಿತ ನಡೆಸುತ್ತಿದ್ದರು. ತಮ್ಮದೇ ಆದ ನಾಣ್ಯಗಳನ್ನು ಠಂಕಿಸುತ್ತಿದ್ದರು. ಕೋಟೆ ಪ್ರದೇಶದಲ್ಲಿ ಗೌರಿ ಮಹಲ್ ಎಂಬ ಸುಸಜ್ಜಿತ ಮನೆಯನ್ನು ನಿರ್ವಿುಸಿದ್ದರು. ನಂದಿಬೆಟ್ಟ ಆಗಲೇ ಶಹಾಜಿಯ ಬೇಸಿಗೆ ರಾಜಧಾನಿಯಾಗಿತ್ತು. ಶಿವಾಜಿಯ ಮೊದಲ ಮಗ ಸಂಬಾಜಿ ಕೋಲಾರ- ದೊಡ್ಡಬಳ್ಳಾಪುರ ಪ್ರದೇಶಗಳ ಆಡಳಿತ ವ್ಯವಸ್ಥೆ ನೋಡಿಕೊಳ್ಳುತ್ತಿದ್ದರು.
 
    🌹ಯುದ್ಧಕಲೆ.
   ತನ್ನ 12ನೇ ವಯಸ್ಸಿನವರೆಗೆ ಬೆಂಗಳೂರಿನಲ್ಲೇ ವಾಸವಿದ್ದ ಶಿವಾಜಿಗೆ ಆರಂಭಿಕ ಶಿಕ್ಷಣವನ್ನು ಕೊಟ್ಟವರು ಅಣ್ಣ ಸಂಬಾಜಿ. ನಂತರ ಶಿವನೇರಿ ದುರ್ಗಕ್ಕೆ ಹಿಂತಿರುಗಿದ ಶಿವಾಜಿಗೆ ಪೂರ್ಣಪ್ರಮಾಣದ ಯುದ್ಧ ಕೌಶಲವನ್ನು ಧಾರೆ ಎರೆದವರು ದಾದಾಜಿಕೊಂಡದೇವ. ಕತ್ತಿವರಸೆ, ಕುದುರೆ ಸವಾರಿ, ಯುದ್ಧಕಲೆಗಳನ್ನು ಕರಗತ ಮಾಡಿಕೊಂಡ ಶಿವಾಜಿ 19 ನೇ ವಯಸ್ಸಿಗೆ ತೋರಣದುರ್ಗ ವಶಪಡಿಸಿಕೊಂಡು ಮಹತ್ವಾಕಾಂಕ್ಷೆಯ ಹೆಜ್ಜೆಗಳನ್ನು ಇಡಲು ಆರಂಭಿಸಿದ್ದರು. ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿಯಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು..
ಶಹಾಜಿ ಜಾಗೀರು ನೋಡಿಕೊಳ್ಳುತ್ತಿದ್ದ ದಾದಾಜಿಕೊಂಡದೇವ ಅವರಿಂದ ಪರಿಪೂರ್ಣ ಸೈನಿಕ ಶಿಕ್ಷಣ ಪಡೆದಿದ್ದ ಶಿವಾಜಿ ಕಾಡುಮೇಡುಗಳಲ್ಲಿ ಸುತ್ತಾಡಿ ಅನುಭವ ಪಡೆದರು. ಪಶ್ಚಿಮ ಘಟ್ಟಗಳ ಮಾವಳರೆಂಬ ಗಿರಿಜನರನ್ನು ಕಂಡ ಶಿವಾಜಿ ಅವರ ಧೈರ್ಯ ಸಾಹಸಗಳನ್ನು ನೋಡಿ ಅವರನ್ನೆಲ್ಲಾ ಸೇರಿಸಿ ಬಲವಾದ ಪಡೆ ಕಟ್ಟಲು ಆರಂಭಿಸಿದರು. ಪ್ರಮುಖ ಮರಾಠ ನಾಯಕರೂ ಇವರೊಡನೆ ಕೈ ಜೋಡಿಸಿದರು. ತಂದೆ ಜಹಗೀರಾದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲೆ ಅದೇ ಪ್ರದೇಶಕ್ಕೆ ಸನಿಹವಿದ್ದ ಮರೆಯಲಾಗದ ಹೇಚಿ ಮಹಾಸಾಮ್ರಾಜ್ಯವಾದ ವಿಜಯನಗರವನ್ನು (ಆ ವೇಳೆಗೆ ಪತನವಾಗಿತ್ತು) ಅದರ ಅವಶೇಷಗಳನ್ನು ಕಂಡು ಬಂದಿದ್ದರು ಯುವಕ ಶಿವಾಜಿ.

    🌹ವಿವಾಹ.
   ತಾಯಿ ಜೀಜಾಬಾಯಿ ಹಾಗೂ ಗುರು ಕೊಂಡದೇವರೊಂದಿಗೆ ಬೆಂಗಳೂರಿಗೆ ಬಂದ ಶಿವಾಜಿ ವಿವಾಹ ನೆರವೇರಿದ್ದು 1640-42 ರ ಸುಮಾರಿಗೆ. ಆಗ ಬೆಂಗಳೂರು ಕೋಟೆಯೊಳಗೆ ಇದ್ದ ಗೌರಿಮಹಲ್​ನಲ್ಲಿ ಶಿವಾಜಿ ಮೊದಲ ವಿವಾಹ ನಿಂಬಾಳ್ಕರ್ ಮನೆತನದ ಸಾಯಿಬಾಯಿ ಜೊತೆಗೆ ವಿಜೃಂಭಣೆಯಿಂದ ಜರುಗಿತು. ಪರದೇಶಿಗಳ ಆಳ್ವಿಕೆಯಿಂದ ನಲುಗಿಹೋಗಿದ್ದ ಹಿಂದೂಸ್ಥಾನವನ್ನು ಒಗ್ಗೂಡಿಸುವ ಮಹತ್ವದ ನಿರ್ಧಾರಕ್ಕೆ ಬಂದ ಶಿವಾಜಿ ಮೊದಲಿಗೆ ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದರು. ಯುದ್ಧಕೌಶಲದಿಂದ ಹಲವಾರು ಯುದ್ಧಗಳಲ್ಲಿ ವಿಜಯ ಸಾಧಿಸಿ 1674 ರಲ್ಲಿ ಮರಾಠ ರಾಜ್ಯಕ್ಕೆ ನಾಂದಿಹಾಡಿದರು.

    🌹ಕಿರೀಟಧಾರಣೆ.
1674 ರಲ್ಲಿ ರಾಯಘಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಿರೀಟಧಾರಣೆ ಆಯಿತು.  ಬಳಿಕ ಛತ್ರಪತಿ ಶಿವಾಜಿ ಮಹಾರಾಜ್ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಶಿವಾಜಿ 1680 ರಲ್ಲಿ ಕಾಲವಾದರೂ ಅವರು ಸ್ಥಾಪಿಸಿದ ಮರಾಠ ರಾಜ್ಯ 1818 ರವರೆಗೆ ಉಜ್ವಲವಾಗಿ ಬೆಳಗಿತು.

     🌹ಗೆಲುವಿನ ಮೂಲ.
    ಒಂದು ಸಲ ಶಿವಾಜಿ ಮಹಾರಾಜರು ಒಂದು ಕೋಟೆಯಿಂದ ಮತ್ತೊಂದು ಕೋಟೆಗೆ ಹೊಗುವಾಗ ದಾರಿ ತಪ್ಪಿದರು. ಆಗ ಅವರು ಒಂದು ಬೆಟ್ಟ ಏರಿ ಯಾವುದಾದರು ಹಳ್ಳಿ ಇದೆಯಾ ಎಂದು ನೋಡಿದರು, ಆದರೆ ಯಾವ ಹಳ್ಳಿಯೂ ಕಾಣಿಸಲಿಲ್ಲ. ರಾತ್ರಿಯಾಗುತ್ತಿತ್ತು, ಅವರು ಬೆಟ್ಟ ಇಳಿದು ಬರುವಾಗ ದೂರದಲ್ಲಿ ದೀಪವೊಂದು ಮಿಣುಕುವುದು ಹೇಚಿ ಕಾಣಿಸುತ್ತಿತ್ತು. ಅದೇ ದಾರಿಯಲ್ಲಿ ಹೋದಾಗ ಅವರು ಒಂದು ಗುಡಿಸಲಿನ ಬಳಿ ಬಂದರು.
ಗುಡಿಸಲಿನಲ್ಲಿ ಒಬ್ಬ ವೃದ್ಧ ಮಹಿಳೆ ಇದ್ದಳು. ಅವಳು ಮಹಾರಾಜರನ್ನು ಒಬ್ಬ ಸೈನಿಕನಿರಬೇಕೆಂದು ತಿಳಿದು ಸ್ವಾಗತಿಸಿದಳು. ಅವನು ಹಸಿದಿರುವನೆಂದು ಅರಿತ ಮಹಿಳೆಯು ಕೈ ಕಾಲು ಮುಖ ತೊಳೆಯಲು ನೀರು ನೀಡಿದಳು ಮತ್ತು ವಿಶ್ರಮಿಸಲು ಚಾಪೆಯನ್ನು ಹಾಸಿದಳು. ಅವನು ವಿಶ್ರಮಿಸಿದ ನಂತರ ಮಹಿಳೆಯು ಬಿಸಿ ಬಿಸಿ ಅನ್ನ ಮತ್ತು ಸಾಂಬಾರನ್ನು ತಿನ್ನಲು ನೀಡಿದಳು.
ತುಂಬಾ ಹೊಟ್ಟೆ ಹಸಿದಿದ್ದ ಶಿವಾಜಿಯು ತಕ್ಷಣ ತಿನ್ನಲು ಬಿಸಿ ಅನ್ನಕ್ಕೆ ಕೈ ಹಾಕಿದನು. ಬಿಸಿ ತಡೆಯಲಾರದೆ ಚೀರಿದನು ಮತ್ತು ಸ್ವಲ್ಪ ಅನ್ನವನ್ನು ಚೆಲ್ಲಿದನು. ಇದನ್ನು ನೋಡಿದ ಮಹಿಳೆಯು ಹೇಳಿದಳು, "ಅರೇ ನೀನು ಸಹ ನಿನ್ನ ಸ್ವಾಮಿ ಶಿವಾಜಿಯಂತೆ ಗಡಿಬಿಡಿ ಮಾಡುತ್ತೀಯ. ಅದಕ್ಕೆ ಕೈ ಸುಟ್ಟುಕೊಂಡೆ ಮತ್ತು ಸ್ವಲ್ಪ ಅನ್ನವನ್ನು ಬೀಳಿಸಿದೆ" ಎಂದಳು. ಹೇಚಿ
ಶಿವಾಜಿಯು ಆಶ್ಚರ್ಯದಿಂದ, "ನನ್ನ ಸ್ವಾಮಿ ಶಿವಾಜಿಯಲ್ಲಿ ತಾಳ್ಮೆ ಇಲ್ಲ ಎಂದು ನೀನು ಯಾಕೆ ಹೇಳುತ್ತೀಯ?" ಎಂದು ಕೇಳಿದನು.
ಆಗ ಮಹಿಳೆಯು ಹೇಳಿದಳು, "ನೋಡು ಮಗನೆ, ಶಿವಾಜಿಯು ತನ್ನ ಗಡಿಬಿಡಿ ಇಂದಾಗಿ ಶತ್ರುಗಳ ಸಣ್ಣ ಕೋಟೆಯನ್ನು ಗೆಲ್ಲುವ ಬದಲಾಗಿ ದೊಡ್ಡ ದೊಡ್ಡ ಕೋಟೆಗಳನ್ನು ಗೆಲ್ಲಲು ಹೊಗುತ್ತಿದ್ದಾನೆ ಮತ್ತು ಇದರಿಂದಾಗಿ ಅವನು ತನ್ನ ವೀರ ಸೈನಿಕರನ್ನು ಕಳೆದುಕೊಳ್ಳುತ್ತಿದ್ದಾನೆ. ಅದರ ಬದಲಿಗೆ ತಾಳ್ಮೆಯಿಂದ ಮೊದಲು ಸಣ್ಣ ಸಣ್ಣ ಕೋಟೆಗಳನ್ನು ಗೆದ್ದರೆ ಅವನ ಬಲವೂ ಹೆಚ್ಚುತ್ತದೆ ಮತ್ತು ಸೈನಿಕರೂ ಉಳಿಯುತ್ತಾರೆ. ಅದೇ ರೀತಿ ನೀನು ಮೊದಲು ಬದಿಯಲ್ಲಿರುವ ತಣ್ಣಗಿರುವ ಅನ್ನವನ್ನು ಮೊದಲು ತಿನ್ನು".
ಶಿವಾಜಿಯು ಕೂಡಲೇ ವೃದ್ಧ ಮಹಿಳೆಯ ಮಾತಿನ ಹಿಂದಿರುವ ಅರ್ಥವನ್ನು ಅರಿತನು ಮತ್ತು ಯಾವುದೇ ತೀರ್ಮಾನವನ್ನು ಗಡಿಬಿಡಿಯಲ್ಲಿ ಮಾಡಬಾರದೆಂದು ಅರಿತನು. ಹೇಚಿ.

     🌹ಗುರುಕಾಣಿಕೆ.
    17 ನೇ ಶತಮಾನದಲ್ಲಿ, ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಭಾರ ಮಾಡುತ್ತಿದ್ದರು. ಅವರ ತಾಯಿ ಜೀಜಾಮಾತೆಯು ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದಳು. ಒಬ್ಬ ರಾಜನಿಗೆ ಬೇಕಾದ ಎಲ್ಲ ಯುದ್ಧಕಲೆಗಳನ್ನೂ ಜೀಜಾಮಾತೆಯು ಶಿವಾಜಿಗೆ ಕಲಿಸಿದ್ದಳು. ಜೀಜಾಮಾತೆ ಮತ್ತು ಗುರು ರಾಮದಾಸ ಸ್ವಾಮಿಗಳ ಮಾರ್ಗದರ್ಶನದಲ್ಲಿ ಶಿವಾಜಿಯು ಆದರ್ಶ ರಾಜನಾದನು. ಶಿವಾಜಿಯು ಧೈರ್ಯದಿಂದ ಮರಾಠರನ್ನು ಮೊಗಲರ ವಿರುದ್ಧ ಮುನ್ನಡೆಸಿದನು. ಶಿವಾಜಿಯು ಆದರ್ಶ ರಾಜ್ಯವನ್ನು ಸ್ಥಾಪಿಸಿದನು. ಶಿವಾಜಿಯು ರಾಜ್ಯವನ್ನು ಧೈರ್ಯ, ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ಸ್ಥಾಪಿಸಿದ್ದನು.

    🌹ಮರಣ.
   ಇಂತಹ ಒಬ್ಬ ಮಹಾನ್ ಸಾಮ್ರಾಟ  ಶಿವಾಜಿ ಮಹಾರಾಜರು 1680 ಏಪ್ರಿಲ್ 14 ಮರಣ ಹೊಂದಿದರು.
  
logoblog

Thanks for reading Chatrapati Shivaji Birth Anniversary

Previous
« Prev Post

No comments:

Post a Comment

If You Have any Doubts, let me Comment Here